ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.
ಮಲಯಮಾರುತ ಅರಣ್ಯ ವ್ಯಾಪ್ತಿಯಲ್ಲಿ ಹೊತ್ತಿಕೊಂಡ ಬೆಂಕಿ ಸುಮಾರು 2 ಕಿಲೋಮೀಟರ್ಗಿಂತ ಹೆಚ್ಚು ಪ್ರದೇಶಕ್ಕೆ ವ್ಯಾಪಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅರಣ್ಯಾಧಿಕಾರಿಗಳ ಮಾಹಿತಿ ಪ್ರಕಾರ ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ತ್ವರಿತವಾಗಿ ಹರಡಿದ್ದು, ಹಲವೆಡೆ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ. ಉಳಿದ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಕಾಡ್ಗಿಚ್ಚಿನಿಂದ ಸಸ್ಯಸಂಕುಲ, ಪ್ರಾಣಿ–ಪಕ್ಷಿಗಳಿಗೆ ಹಾನಿಯಾಗಿರುವ ಸಾಧ್ಯತೆ ಇದೆ. ಕಾಡ್ಗಿಚ್ಚಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ; ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
#Chikkamagaluru #CharmadiGhat #ForestFire #Chikkamagaluru#CharmadiGhat#ForestFire#KarnatakaNews#Mudigere#WesternGhats#AranyaNashta #FireAccident#SOENews


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ