ಬೆಳಗಾವಿ:ಬದುಕಿರುವ ರೈತನಿಗೆ ಮರಣ ಪ್ರಮಾಣಪತ್ರ: ಗ್ರಾಮ ಲೆಕ್ಕಾಧಿಕಾರಿ ಅಮಾನತು

ಬೆಳಗಾವಿ: ರೈತರೊಬ್ಬರು ಜೀವಂತವಾಗಿದ್ದರೂ ಅವರ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಲೋಪ ಎಸಗಿದ ಗ್ರಾಮ ಲೆಕ್ಕಾಧಿಕಾರಿಯನ್ನು ಮೊಹಮ್ಮದ್ ರೋಷನ್, ಬೆಳಗಾವಿ ಜಿಲ್ಲಾಧಿಕಾರಿ, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶ ದ ಪ್ರತಿ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಿವ ಸುತಗಟ್ಟಿ ಗ್ರಾಮದ ರೈತ ಈರಪ್ಪ ನಾಗಪ್ಪ ಅಬ್ಬಾಯಿ ಅವರು ಜೀವಂತವಾಗಿದ್ದರೂ, 2021ರಲ್ಲೇ ಮೃತಪಟ್ಟಿದ್ದಾರೆ ಎಂದು ದಾಖಲೆಗಳಲ್ಲಿ ನಮೂದಿಸಲಾಗಿದೆ. ಕಳೆದ ಐದು ವರ್ಷಗಳಿಂದ ಈ ವಿಷಯ ರೈತನಿಗೆ ತಿಳಿಯದೇ, ಸರ್ಕಾರಿ ಯೋಜನೆಗಳ ಸೌಲಭ್ಯಗಳಿಂದ ಅವರು ವಂಚಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಲೋಪ ಎಸಗಿದ ಆರೋಪದಡಿ ಸುತಗಟ್ಟಿ ಗ್ರಾಮದ ಆಡಳಿತಾಧಿಕಾರಿ ನೀಲಾ ಮುರಗೋಡ, ಮುರಗೋಡ ವೃತ್ತದ ಕಂದಾಯ ನಿರೀಕ್ಷಕ ಆರ್.ಎಸ್. ಪಾಟೀಲ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಹಾಗೂ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ವಿರುದ್ಧ ಲೋಕಾಯುಕ್ತರು ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#Belagavi #Lokayukta #DeathCertificateScam #VillageAccountant #AdministrativeLapse #KarnatakaNews

ಕಾಮೆಂಟ್‌ಗಳು