ಬಾಗಲಕೋಟೆ: ಜಿಲ್ಲಾಧಿಕಾರಿ ಶ್ರೀ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾಧಿಕಾರಿ ಶ್ರೀ ರಮೇಶ್ ಸುಂಬಡ ಅವರು ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗನ್ ಜಿ. ಟಿರಕಿ ಮಾತನಾಡಿ, ಜಿಲ್ಲೆಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ನೇಕಾರರಿಗೆ ಕಾರ್ಡ್ಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು. ವೃತ್ತಿಪರ ನೇಕಾರರು ಹಾಗೂ ಇತರೆ ಕಾರ್ಮಿಕರ ನೋಂದಣಿ ಇನ್ನೂ ಬಾಕಿ ಇದ್ದು, ಕೂಡಲೇ ನೋಂದಣಿ ಕಾರ್ಯವನ್ನು ಆರಂಭಿಸಬೇಕು ಎಂದು ಅವರು ಹೇಳಿದರು.
ನೇಕಾರರಿಗೆ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ವಿವಿಧ ಸೌಲಭ್ಯಗಳನ್ನು ಜಾರಿಗೆ ತಂದು, ಕಟ್ಟಕಡೆಯ ನೇಕಾರರಿಗೆ ನ್ಯಾಯ ಒದಗಿಸಲು ಕಾರ್ಮಿಕ ಇಲಾಖೆ ಮತ್ತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘದ ವತಿಯಿಂದ ಮನವಿ ಮಾಡಲಾಯಿತು.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ